ಮಂಡ್ಯದಲ್ಲಿ ಎತ್ತಿನ ಗಾಡಿ ಸ್ಪರ್ಧೆಗೆ ಹೈಕೋರ್ಟ್ ಒಪ್ಪಿಗೆ, ಷರತ್ತುಬದ್ಧವಾಗಿ ಸ್ಪರ್ಧೆ ನಡೆಸಲು ಅನುಮತಿ
ಬೆಂಗಳೂರು: ಮಂಡ್ಯದಲ್ಲಿ ಎತ್ತಿನ ಗಾಡಿ ಸ್ಪರ್ಧೆಗೆ ಹೈಕೋರ್ಟ್ ಒಪ್ಪಿಗೆ ನೀಡಿದೆ. ಷರತ್ತುಬದ್ಧವಾಗಿ ಸ್ಪರ್ಧೆ ನಡೆಸಲು ಅನುಮತಿ ನೀಡಿದ್ದು ಸುಪ್ರೀಂಕೋರ್ಟ್ ವಿಧಿಸಿರುವ ಷರತ್ತು ಪಾಲಿಸಲು ಸೂಚಿಸಿದೆ.
ಮಂಡ್ಯದಲ್ಲಿ ಎತ್ತಿನ ಬಂಡಿ ಸ್ಪರ್ಧೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಮಂಡ್ಯದಲ್ಲಿ ಎತ್ತಿನ ಬಂಡಿ ಸ್ಪರ್ಧೆಗೆ ಮಂಡ್ಯದ ಜಿಲ್ಲಾಡಳಿತ ಅನುಮತಿ ನೀಡಿತ್ತು. ನಂತರ ಕೊವಿಡ್ ಕಾರಣದಿಂದ ಅನುಮತಿ ಹಿಂಪಡೆಯಲಾಗಿತ್ತು. ಎತ್ತಿನ ಬಂಡಿ ಸ್ಪರ್ಧೆ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಮೈಸೂರಿನ ಪ್ರಾಣಿ ಕಲ್ಯಾಣ ಸಂಘ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ರಾಜ್ಯ ಸರ್ಕಾರ ಎತ್ತಿನ ಬಂಡಿ ಸ್ಪರ್ಧೆಗೆ ತನ್ನದೇ ಇತಿಹಾಸ ಹಾಗೂ ಪರಂಪರೆ ಇದೆ. ಸ್ಪರ್ಧೆ ವೇಳೆ ಯಾವುದೇ ಪ್ರಾಣಿ ಹಿಂಸೆ ಆಗುವುದಿಲ್ಲ. ಹೀಗಾಗಿಯೇ ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ರಾಜ್ಯ ಸರ್ಕಾರ 2018 ರಲ್ಲಿ ತಿದ್ದುಪಡಿ ತಂದಿದೆ.
Source:Tv9kannada