ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ

Jan 22, 2021

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ನವದೆಹಲಿ: ಕೊರೊನಾ ವೈರಸ್​ ಕಾರಣ ನೀಡಿ 2020ರ ನಾಗರಿಕ ಸೇವಾ ಆಯೋಗ ಪರೀಕ್ಷೆ ಬರೆಯದವರಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಕೊರೊನಾ ಕಾರಣದಿಂದ ಅನೇಕರು ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಇದೇ ಕಾರಣ ನೀಡಿ ಅನೇಕರು ಮತ್ತೊಂದು ಅವಕಾಶ ಕೇಳಿದ್ದರು. ಈ ಬಗ್ಗೆ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂಕೋರ್ಟ್​ ಪೀಠ, ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು. ಇದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ, ನಾವು ಮತ್ತೊಂದು ಅವಕಾಶ ನೀಡಲು ಸಿದ್ಧರಿಲ್ಲ ಎಂದು ಹೇಳಿದೆ.

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ಕೆಲ ಕಡೆಗಳಲ್ಲಿ ಪ್ರವಾಹ ಏರ್ಪಟ್ಟಿತ್ತು. ಅಲ್ಲದೆ, ದೇಶಾದ್ಯಂತ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ,  ಕಳೆದ ಅಕ್ಟೋಬರ್​ 4ರಂದು ನಡೆಯಬೇಕಿದ್ದ ಯುಪಿಎಸ್​​ಸಿ ನಾಗರಿಕ ಸೇವೆಯ ಪ್ರಿಲಿಮಿನರಿ ಪರೀಕ್ಷೆ ಮುಂದೂಡುವಂತೆ ಕೋರಲಾಗಿತ್ತು. ಆದರೆ, ಸರ್ಕಾರ ಈ ಮನವಿ ತಿರಸ್ಕರಿಸಿತ್ತು.

Source: TV9Kannada