Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ

Aug 10, 2021

 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ಭಯೋತ್ಪಾದಕರು ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಈ ದಾಳಿಯಲ್ಲಿ ಐದು ನಾಗರಿಕರು ಗಾಯಗೊಂಡಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಮಧ್ಯಾಹ್ನ 2.40 ರ ಸುಮಾರಿಗೆ ದುಷ್ಕರ್ಮಿಗಳು ಗ್ರೆನೇಡ್‌ನೊಂದಿಗೆ ಎಸ್‌ಎಸ್‌ಬಿಯ ಬಂಕರ್‌ಗೆ ಗುರಿಯಿಟ್ಟಿದ್ದಾರೆ ಯಾವುದೇ ಭದ್ರತಾ ಪಡೆ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ಕಿಶೋರ್ ಪ್ರಸಾದ್, ಡಿಐಜಿ ಸಿಆರ್‌ಪಿಎಫ್ ಹೇಳಿದ್ದಾರೆ.

Source: tv9 kannada