Mysuru Dasara 2021: ಈಬಾರಿಯೂ ಸರಳ ಮೈಸೂರು ದಸರಾ ಆಚರಣೆ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

Sep 4, 2021

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕಳೆದ ವರ್ಷದಂತೆಯೇ ಈ ವರ್ಷವೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಸರಾ ಆಚರಣೆ ಕುರಿತ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಬಾರಿ ದಸರಾ ಉದ್ಘಾಟನೆಗೆ 150 ಜನರಿಗೆ ಅವಕಾಶವಿತ್ತು. ಜಂಬೂ ಸವಾರಿಗೆ 200 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಈಬಾರಿ ಈ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಿಸಲು ಹಿಂದಿನ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚು ಜನರಿಗೆ ಅವಕಾಶ ನೀಡಬೇಕೆಂದು ಒತ್ತಡ ಬಂದಿದೆ ಎಂದು ಸಹ ಅವರು ತಿಳಿಸಿದರು.

ಇನ್ನೂ ಒಂದು ಹಂತದ ಸಭೆ ನಡೆಸಿ ಈಕುರಿತು ನಿರ್ಧರಿಸುವುದಾಗಿಯೂ ಅವರು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಸಚಿವ ಎಸ್​ ಟಿ ಸೋಮಶೇಖರ್, ಸೆಪ್ಟೆಂಬರ್ 20ರ ಬಳಿಕ ಕೊವಿಡ್ ಸ್ಥಿತಿಗತಿ ತಿಳಿದುಕೊಂಡು ಅನುಮತಿ ನೀಡುವ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

Source:Tv9kannada