Shikshak Parv 2021: ವಿದ್ಯಾರ್ಥಿಗಳು, ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತು
Shikshak Parv 2021: ಶಿಕ್ಷಕ ಪರ್ವ 2021ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೂತನ ಯೋಜನೆಗಳನ್ನು ಉದ್ಘಾಟಿಸಲಿರುವ ಅವರು ಕೊರೊನಾ ಸಂದರ್ಭದಲ್ಲೂ ಶ್ರಮಿಸಿದ ಶಿಕ್ಷಕ ವೃಂದಕ್ಕೆ ಹಾಗೂ ಈ ಬಾರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಶಿಕ್ಷಕರಿಗೆ ಅಭಿನಂದನೆ ತಿಳಿಸಿದ್ದಾರೆ.
ಭಾರತದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸಲು ತೆಗೆದುಕೊಳ್ಳುವ ಕ್ರಮದ ಬಗ್ಗೆ ಮಾತನಾಡಿದ ಅವರು ಹೊಸ ಯೋಜನೆಗಳು ಶಿಕ್ಷಣ ಕ್ಷೇತ್ರದ ವ್ಯಾಪ್ತಿ ಹಾಗೂ ಹಿರಿಮೆಯನ್ನು ಹೆಚ್ಚಿಸುವುದಷ್ಟೇ ಅಲ್ಲದೇ ವಿದ್ಯಾರ್ಥಿಗಳ ಭವಿಷ್ಯಕ್ಕೂ ಸಹಕಾರಿಯಾಗಲಿವೆ ಎಂದು ಬಣ್ಣಿಸಿದ್ದಾರೆ. ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯ ಮಹತ್ವದ ಕುರಿತು ಇದೇ ವೇಳೆ ಕೆಲ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಅಂತೆಯೇ ಖಾಸಗಿ ವಲಯಗಳಿಗೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ರೂಪಿಸಲು ಸಹಕಾರ ನೀಡುವಂತೆ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ವಿಚಾರದಲ್ಲಿ ನೀವು ಸ್ವಯಂಪ್ರೇರಿತರಾಗಿ ಮುಂದೆ ಬಂದು ಶೈಕ್ಷಣಿಕ ಪದ್ಧತಿಯನ್ನು ಇನ್ನಷ್ಟು ಎತ್ತರಕ್ಕೇರಿಸಲು ಸಹಕರಿಸಬೇಕು ಎಂದಿದ್ದಾರೆ.
Source:tv9kannada